
ರಾಮಾಯಣದಲ್ಲಿ ರಾಮನಿಗಿಂತ ಹೆಚ್ಚು ಪ್ರಭಾವಶಾಲಿ ಆಗಿರುವುದು ರಾಮ ನಾಮ ಅಂತ ತಿಳಿದೋರು ಹೇಳುತ್ತಾರೆ.ನಮ್ಮಲ್ಲೂ ಅದರ ಬಗ್ಗೆ ಅನೇಕ ಕೀರ್ತನೆಗಳುಜಾರಿಯಲ್ಲಿವೆ .'ರಾಮ ಎಂಬುವ ಎರಡು ಅಕ್ಷರದ ಮಹಿಮೆಯನು ಪಾಮರರು ತಾವೇನು ಬಲ್ಲರೈಯ್ಯ'ಹೀಗೆ ಆರಂಭಗೊಂಡ ಹಾಡು ರಾ ಅಕ್ಶರದ ಮಹಿಮೆಯಿಂದ ಹೇಳುತ್ತಾ ಹೋಗುತ್ತದೆ.ಅದೇ ರೀತಿ ನಾವು 'ರಾಮನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ವಿಠಲ ತುಪ್ಪವ ಬೆರೆಸಿ ಬಾಯಿ ಚಪ್ಪರಿಸಿರೋ 'ಅಂತಲೂ ಹಾಡಿದ್ದೆವು ಹಾಗು ಹಾಡುತ್ತಲು ಇದ್ದೇವೆ.ಅಂದ್ರೆ ರಾಮ ಅನ್ನುವ ವ್ಯಕ್ತಿಗಿಂತ ಆತನ ನಾಮ ಎಷ್ಟು ಪ್ರಾಮುಖ್ಯತೆ ಪಡೆದಿದೆ ಅಂತ ಆಯ್ತಲ್ಲ.'ಶ್ರೀ ರಾಮ ಕೇವಲ ಅಯೋಧ್ಯ ಅಳಿದರೆ ರಾಮನಾಮ ಇಡಿ ಲೋಕವನ್ನು ಅಳುತ್ತದೆ'ಎಂದು ಸ್ವಯಮ್ ಹನುಮಂತ ಹೇಳಿರುವುದಾಗಿ ರಾಮಾಯಣದಲ್ಲಿ ಉಲ್ಲೇಖ ಮಾಡಿದೆ.ಈ ರಾಮ ಅನ್ನುವ ಎರಡು ಅಕ್ಷರ ಯಾವುದರಿಂದ ಪಡೆಯಲಾಗಿದೆ ಅನ್ನುವ ಅಂಶವು ತುಂಬಾ ಆಸಕ್ತಿದಾಯಕ ಆಗಿದೆ."ಓಂ ನಮೋ ನಾರಾಯಣಾಯ" ಎನ್ನುವ ಅಷ್ಟಾಕ್ಷರಿ ಮಂತ್ರದಲ್ಲಿನ 'ರಾ' ಎನ್ನುವ ಐದನೇ ಅಕ್ಷರವನ್ನು ಹಾಗು 'ಓಂ ನಮಶಿವಾಯ' ಎನ್ನುವ ಪಂಚಾಕ್ಷರಿ ಮಂತ್ರದಲ್ಲಿ 'ಮ' ಅಕ್ಷರ ತೆಗೆದು ಕೊಳ್ಳಲಾಗಿದೆ.ಅಂದರೆ ರಾಮ 'ಶಿವಕೇಶವರ 'ಏಕೀಕೃತ ಮೂರ್ತಿ.ಹೀಗೆ ಅನೇಕ ರೀತಿಯಲ್ಲಿ ಭಗವಂತನ ಬಗ್ಗೆ ಹೇಳುತ್ತಾರೆ ಭಕ್ತರು.ಏಕ ಪತಿ ವ್ರತಸ್ಥ ಅಂತ ಹೇಳುತ್ತಾರೆ,ಆದರೆ ಇನ್ನೊಬ್ಬ ಲೇಖಕರ ಅನ್ವಯ ಆತನ ತಂದೆ ದಶರಥನಿಗೆ ಸ್ವಲ್ಪ ಸ್ತ್ರೀ ಮೋಹ ಅದನ್ನು ಕಣ್ಣಾರೆ ಕಂಡು ಆತ ಏಕ ಪತ್ನಿ ವ್ರತಕ್ಕೆ ಬದ್ಧನಾದ ಅಂತಾರೆ.ಅದೆಷ್ಟು ನಿಜವೋ ಗೊತ್ತಿಲ್ಲ! ಏನೇ ಆದರು ನಾರ್ತ್ ಇಂಡಿಯನ್ ರಾಮ ದಕ್ಷಿಣವನ್ನು ಹಾಗು ಸೌತ್ ಇಂಡಿಯನ್ ಹನುಮ ಉತ್ತರವನ್ನು ಆಳ್ತಾ ಇರೋದು ಮಾತ್ರ ಸೋಜಿಗದ ಸಂಗತಿ.ಇನ್ನೊಂದು ವಿಷಯ ರಾಮ ಅಂದರೆ ಕನ್ನಡದಲ್ಲಿ 'ಪ್ರಿಯ'ಅನ್ನುವ ಅರ್ಥ ಬರುತ್ತದೆ.ರಾಮ ಆದ್ದರಿಂದಲೇ ಎಲ್ಲ ಕಾಲಕ್ಕೂ ಎಲ್ಲರಿಗೆ ಹೇಗೋ ಅಂತು ಪ್ರಿಯ ತುಂಬ ಪ್ರಿಯ!
http://kannada.blogkut.com/
ReplyDelete